ಕಂಬನಿ ಕಾಣದಿರಲೆಂದು ಮಳೆಯಲ್ಲಿ ಅಳುತ್ತಿದ್ದವ ಪ್ರತಿ ಹನಿಯಲ್ಲೂ ಅವಳನ್ನೇ ಹುಡುಕುತ್ತಿದ್ದ. ಅವಳು ಕಾಣಲೇ ಇಲ್ಲ. ದಿಗಿಲಾಗಿ ತಲೆಯೆತ್ತಿದ. ಆಕಾಶವಿರಲಿಲ್ಲ ಅಲ್ಲಿ. ಆಕೆಯ ಕಣ್ಣುಗಳಿದ್ದವು!
ಹೀಗೆ ಒಂದು ಬೆಳದಿಂಗಳ ರಾತ್ರಿ ಮಗುವಿಗೆ ತುತ್ತು ಉಣಿಸಲು ತಾಯಿ ಹರ ಸಾಹಸ ಪಡುತ್ತಿದ್ದಳು. ನೀ ತಿನ್ನದಿದ್ದರೆ
ಚಂದಿರಗೇ ಇವೆಲ್ಲಾ ಎಂದು ಸಣ್ಣಗೆ ಗದರುತ್ತಿದ್ದಳು. ಅವತ್ತು ಚಂದಿರನೇ ಬಂದು ಉಂಡು ಹೋದ ಮತ್ತು ಅವತ್ತಿನಿಂದ ಅವ ಅನಾಥನಾದ!
ಬಂದೂಕುಗಳನ್ನು ನೆಟ್ಟು ಗುಂಡಿನ ಮಳೆಗಾಗಿ ಕಾತರಿಸಿದ್ದೆ. ಬರಗಾಲ ಬಂದಿತು. ಬಂದೂಕುಗಳೆಲ್ಲಾ ಸತ್ತು ಹೋದವು. ಮಳೆ ಬಂದಿತು. ಆದರೆ ಗುಂಡುಗಳದ್ದಲ್ಲ!
ಕಪ್ಪು [...]
Archive for the ‘ಪ್ರಬಂಧ’ Category
ಒಂದಿಷ್ಟು ಚಿತ್ರಿಕೆಗಳು
Posted in ಪ್ರಬಂಧ, tagged ಕ್ಯಾನ್ವಾಸ್, ಚಿತ್ರಿಕೆ, ಪೇಂಟಿಂಗ್ on September 16, 2008 | 4 Comments »
ಮುಂಗಾರಿನಾಭಿಷೇಕಕೆ ಮಿದುವಾಯಿತು ನೆಲವು…!
Posted in ಪ್ರಬಂಧ on June 26, 2008 | 3 Comments »
ಮಳೆ ಬರೇ ಮಳೆಯಲ್ಲ! ಅದೊಂದು ಸುಮಧುರ ಕಾವ್ಯ, ದಿಗಂತದಾಚೆಗೆ ದೊರೆಯಬಹುದಾದ ಅನುಭೂತಿ, ಸೃಷ್ಟಿಯ ಸುಂದರ ದೃಶ್ಯಾವಳಿಗಳ ಮುಖವಾಣಿ, ಬದುಕು ಮತ್ತದರ ಬವಣೆಗಳನ್ನು ಮರೆಯಿಸುವ ತಾಕತ್ತುಳ್ಳ ಜಾದೂಗಾರ…ಮತ್ತಿನ್ನೇನೋ…
ಅದು ಭಾವನೆಗಳ ಕೇಂದ್ರವೂ ಹೌದು ಭಕುತಿಯದ್ದೂ ಸರಿ. ಮನುಷ್ಯ ಮತ್ತು ಮಳೆಯ ನಡುವಿನ ನಂಟು ಕೇವಲ ಕನಸು, ಕನವರಿಕೆ, ನೆನಪುಗಳಿಗಷ್ಟೇ ಸಂಬಂಧಿಸಿದ್ದಲ್ಲ. ಅದು ಜೀವಂತಿಕೆಯ, ಉಮೇದಿನ ಚಿಲುಮೆ. ಭೂಮಿಯ ಕ್ಯಾನ್ವಾಸ್ ಮೇಲೆ ಮುಗಿಲ ಕುಂಚ ಚಿಮುಕಿಸುವ ಬಣ್ಣದ ಗೊಂಚಲು.
ವರ್ಷ ಋತುವಿನ ಮೊದಲ ಮೋಡ ಆಗಸದಲ್ಲಿ ಇಣಿಕಿದ್ದನ್ನು ಕಂಡು ಖುಷಿ ಪಡದ ಮಂದಿಯಿದ್ದಾರೆಯೇ? [...]
ಮಾತೆಯೆಂದೊಡೆ ಮಮತೆಯಿರಲಿ
Posted in ಪ್ರಬಂಧ, tagged ಅಮ್ಮ, ಮಾತೆಯ ದಿನ on May 11, 2008 | 8 Comments »
ಅಮ್ಮಾ ಎಂದರೆ ಏನೋ ಹರುಷವು… ನಮ್ಮ ಬಾಳಿಗೆ ನೀನೇ ದೈವವು… ಅಮ್ಮನ ಬೆಚ್ಚನೆ ಮಡಿಲಿನ ನೆನಪು ಈಗಾಗಲೇ ಆಗಿರಬೇಕಲ್ವಾ? ಬಾಲ್ಯದ ಆರ್ದೃ ನೆನಪುಗಳ ಬುಟ್ಟಿ ಬಿಚ್ಚಿ ನೋಡಿ. ಅಮ್ಮನಿಲ್ಲದೇ ಕುಡಿಯೊಡೆದ ಕನಸುಗಳೊಂದೂ ಸಿಗದು. ಅಮ್ಮನ ನೆರವಿಲ್ಲದೇ ಸಾಧಿಸಿದ ಕೆಲಸಗಳೂ ವಿರಳ.
ಅಪ್ಪನ ಪ್ರವಾಹದಂತ ಕೋಪಕ್ಕೆ ತುತ್ತಾಗಿ ಅಳುಮೋರೆ ಮಾಡಿಕೊಂಡು ಮೂಲೆಗೆ ಮೊರೆ ಹೊಕ್ಕಾಗ ರಮಿಸಿದ, ಕಷ್ಟದ ಪರೀಕ್ಷೆ ಎದುರಿಸಿ ಬಂದು ಫೇಲಾಗುವ ಭೀತಿಯಲ್ಲಿದ್ದಾಗ ಧೈರ್ಯ ತುಂಬಿದ, ಮೊದಲ ಸಲ ಬೀಡಿ ಸೇದಿ ಸಿಕ್ಕಿ ಬಿದ್ದಾಗ ಬಾಸುಂಡೆ ಬರುವಂತೆ ಬಾರಿಸಿದರೂ [...]
ಮಳೆ ನಿಂತು ಹೋದ ಮೇಲೆ…
Posted in ಪ್ರಬಂಧ, tagged ಅಮ್ಮ, ಅವಳು, ಕಡಲು, ಪ್ರೀತಿ, ಮಳೆ on February 1, 2008 | 5 Comments »
ಪ್ರೀತಿ ಕಡಲೋ, ಮುಗಿಲೋ, ಮಳೆಯೋ ಮತ್ತಿನ್ನೇನೋ? ನನಗೊಂದೂ ಗೊತ್ತಿಲ್ಲ. ಆದರೆ ಈ ಪರಿಯ ಹೋಲಿಕೆ ಪ್ರೀತಿಯ ಅರ್ಥವನ್ನು ಸೀಮಿತಗೊಳಿಸಬಹ್ಮದೆಂಬ ಭಯ ನನಗೆ ಕಾಡಿದ್ದಿದೆ. ಪ್ರೀತಿಯ ಕುರಿತಾಗಿ ಪ್ಮಟಗಟ್ಟಲೇ, ಗಂಟೆಗಟ್ಟಲೇ ಭಯಂಕರವಾಗಿ ಕೊರೆಯುವವರು, ಕನವರಿಸುವವರ ಎದುರು ನಿಂತು ನಿಜಕ್ಕೂ ಪ್ರೀತಿಯೆಂದರೆ ಅಷ್ಟೇನಾ ಕೇಳಬೇಕೆನಿಸುತ್ತದೆ, ಸುಮ್ಮನಾಗುತ್ತನೆ!
ಸತ್ಯವಾಗಿ ಹೇಳುತ್ತೇನೆ, ನೀನಂದು ನನ್ನ ಮರೆತೆಯೆಂದು ತಿಳಿದ ಕ್ಷಣ ನಾನು ಭೋರ್ಗರೆವ ನದಿಯಾಗಲಿಲ್ಲ. ಜಿಟಿ ಜಿಟಿ ಸುರಿಯುವ ಮಳೆಯಾಗಲಿಲ್ಲ. ತಣ್ಣಗಿರುವ ಧರಣಿಯ ಸ್ಥಿತಿಗೆ ಹೋಲಿಸಬಹುದಿತ್ತಷ್ಟೇ. ನೀನು ಕೋಪಿಸಿಕೊಂಡರೂ ಇನ್ನು ಚಿಂತಿಲ್ಲ! ನಾನು ಹೇಳಬೇಕೆನಿಸಿದ್ದನ್ನೆಲ್ಲಾ ಹೇಳುವವನೇ… [...]